ವಿದ್ಯಾರ್ಥಿಗಳ ಸುರಕ್ಷತೆಗಾಗಿ ಶಿಕ್ಷಣ ಇಲಾಖೆಯಿಂದ ನಿಯಮ ಜಾರಿ : ಧ್ವಜಾರೋಹಣಕ್ಕೆ ವಿದ್ಯಾರ್ಥಿಗಳನ್ನು ಬಳಸುವಂತಿಲ್ಲ

ಶಾಲೆಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಠಿಯಿಂದ ಸಾರ್ವಜನಿಕ ಶಿಕ್ಷಣ ಇಲಾಖೆ ಕೆಲವು ಮಹತ್ವದ ನಿಯಮಗಳನ್ನು ಜಾರಿಗೆ ತಂದಿದೆ. ರಾಷ್ಟ್ರೀಯ ಹಬ್ಬಗಳು, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತಂತೆ ಮಾರ್ಗಸೂಚಿ ಹೊರಡಿಸಲಾಗಿದೆ.
ಇನ್ನು ಈ ನಿಯಮಗಳು ಯಾವುದು ಅನ್ನೋದನ್ನ ನೋಡೋದಾದ್ರೆ, ಧ್ವಜ ಏರಿಸಲು ಹಾಗೂ ಇಳಿಸುವಾಗ ಮಕ್ಕಳನ್ನು ಬಳಕೆ ಮಾಡಬಾರದು, ಧ್ವಜಾರೋಹಣ ಸಂದರ್ಭದಲ್ಲಿ ಬಾವುಟ ಸಿಕ್ಕಿ ಹಾಕಿಕೊಂಡಲ್ಲಿ ಮಕ್ಕಳು ಧ್ವಜಸ್ತಂಭ ಏರಿ ಸರಿಪಡಿಸುವಂತಿಲ್ಲ. ಧ್ವಜಾರೋಗಣ ಸಂದರ್ಭದಲ್ಲಿ ವಿದ್ಯುತ್​ ತಂತಿ ಹಾದು ಹೋಗದಂತೆ ಎಚ್ಚರ ವಹಿಸಬೇಕು ಮಕ್ಕಳು ಕಾರ್ಯಕ್ರಮಕ್ಕೆ ತೆರಳಲು ಬಳಸುವ ವಾಹನಗಳ ಪರಿಶೀಲನೆ ನಡೆಸಿರಬೇಕು. ಹಾಗೂ ವಾಹನ ಚಾಲಕರು ವೇಗಮಿತಿಯ ನಿಯಮ ಪಾಲಿಸುವುದು ಕಡ್ಡಾಯವಾಗಿರಲಿದೆ.

ಇದನ್ನೂ ಓದಿ: ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ ಭಾಗ್ಯ : ಶೀಘ್ರದಲ್ಲೇ ಬರಲಿದೆ ಹೊಸ ನಿಯಮ

ಆಹಾರ ತಯಾರಿಸುವ ಸ್ಥಳಗಳಲ್ಲಿ ಮಕ್ಕಳ ಪ್ರವೇಶ ನಿರ್ಬಂಧಿಸಬೇಕು.ಗ್ಯಾಸ್​ ಒಲೆಗಳನ್ನು ಪರಿಶೀಲಿಸಿ ಬಳಿಕ ಅಡುಗೆಗೆ ಬಳಸಿಕೊಳ್ಳಬೇಕು. ಮಕ್ಕಳು ಕುಳಿತುಕೊಳ್ಳುವ ಸ್ಥಳಗಳಲ್ಲಿ ಯಾವುದೇ ರೀತಿಯ ವಿದ್ಯುತ್ ಸಂಪರ್ಕ ಇರದಂತೆ ನೋಡಿಕೊಳ್ಳಬೇಕು.ಕಾರ್ಯಕ್ರಮ ನಡೆಯುವ ಸ್ಥಳದಿಂದ 100 ಮೀಟರ್​ ಅಂತರದಲ್ಲಿ ವಾಹನ ಪಾರ್ಕಿಂಗ್​ಗೆ ಅವಕಾಶ ಸೇರಿದಂತೆ ಇನ್ನೂ ಅನೇಕ ನಿಯಮಗಳನ್ನು ಶಿಕ್ಷಣ ಇಲಾಖೆ ಜಾರಿಗೆ ತಂದಿದೆ.

Exit mobile version