ಗುಡ್‌ ನ್ಯೂಸ್! ಈ ವಾರವೇ ಗೃಹಲಕ್ಷ್ಮೀ ಹಣ ಖಾತೆಗೆ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಘೋಷಣೆ

Gruhalakshmi Scheme installment: ಬೆಳಗಾವಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯ ಹಣಕ್ಕಾಗಿ ಕಾಯುತ್ತಿದ್ದ ಮಹಿಳೆಯರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಿಹಿ ಸುದ್ದಿ ನೀಡಿದ್ದಾರೆ. 24ನೇ ಕಂತು ಈ ವಾರವೇ ಫಲಾನುಭವಿಗಳ ಖಾತೆಗೆ ಜಮೆಯಾಗಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಯೋಜನೆಯ ಹಣ ಬಿಡುಗಡೆ ಪ್ರಕ್ರಿಯೆಯ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ:

ಸುದ್ದಿಯ ಮುಖ್ಯಾಂಶಗಳು:

ಇದನ್ನೂ ಓದಿ: ಭಾರತಕ್ಕೆ ಹೀಗೆ ಬಂದು ಹಾಗೆ ಹೋದ ಮೆಸ್ಸಿ ಗಳಿಸಿದ್ದು 89 ಕೋಟಿ!

ಫಲಾನುಭವಿಗಳು ಏನು ಮಾಡಬೇಕು?

ಹಣ ಬಾರದಿದ್ದಲ್ಲಿ ಮಹಿಳೆಯರು ಮೊದಲು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿದೆಯೇ ಮತ್ತು ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಂಡಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಒಂದು ವೇಳೆ ಎಲ್ಲವೂ ಸರಿಯಾಗಿದ್ದರೂ ಹಣ ಬಾರದಿದ್ದರೆ ಸಮೀಪದ ಗ್ರಾಮ ಒನ್ ಅಥವಾ ಕರ್ನಾಟಕ ಒನ್ ಕೇಂದ್ರಗಳಿಗೆ ಭೇಟಿ ನೀಡಿ ಸ್ಥಿತಿಗತಿಯನ್ನು ಪರಿಶೀಲಿಸಬಹುದು.

ಸಚಿವರ ಈ ಸ್ಪಷ್ಟನೆಯಿಂದಾಗಿ ರಾಜ್ಯದ ಸುಮಾರು 1.20 ಕೋಟಿಗೂ ಹೆಚ್ಚು ಗೃಹಲಕ್ಷ್ಮಿ ಫಲಾನುಭವಿಗಳಲ್ಲಿ ಮನೆ ಮಾಡಿದ್ದ ಆತಂಕ ದೂರವಾದಂತಾಗಿದೆ.

Exit mobile version