ಕರ್ನಾಟಕ ಹವಾಮಾನ ವರದಿ : ಉಡುಪಿ, ಮಂಗಳೂರಲ್ಲಿ ಸುರಿಯಲಿದೆ ಮಳೆ

ಹವಾಮಾನ ಇಲಾಖೆಯ ವರದಿಯ ಪ್ರಕಾರ, ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡ ಭಾಗದಲ್ಲಿ ಇಂದು ಸಂಜೆ ವೇಳೆಗೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ತಾಪಮಾನವು 33-35 ಡಿಗ್ರಿ ಸೆಲ್ಸಿಯಸ್ ದಾಟಿದ್ದು, ಸೆಖೆಯಿಂದ ಕಂಗೆಟ್ಟಿದ್ದ ಜನರಿಗೆ ಈ ಮಳೆ ನಿರಾಳತೆ ನೀಡಲಿದೆ.

Karnataka weather update : ಬೆಂಗಳೂರು : ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಜನತೆಗೆ ಹವಾಮಾನ ಇಲಾಖೆ (IMD) ಸಿಹಿ ಸುದ್ದಿ ನೀಡಿದೆ. ಇಂದು ( ಮಾರ್ಚ್ 26) ಕರ್ನಾಟಕದ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಈ ಅಕಾಲಿಕ ಮಳೆಯು ತಾಪಮಾನ ಇಳಿಕೆಯಾಗಲಿದೆ. ಆದರೆ ಬಿರುಗಾಳಿ ಮತ್ತು ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಯಾವ ಜಿಲ್ಲೆಗಳಲ್ಲಿಂದು ಮಳೆಯ ಆರ್ಭಟ ?

ಹವಾಮಾನ ಇಲಾಖೆಯ ವರದಿಯ ಪ್ರಕಾರ, ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡ ಭಾಗದಲ್ಲಿ ಇಂದು ಸಂಜೆ ವೇಳೆಗೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ತಾಪಮಾನವು 33-35 ಡಿಗ್ರಿ ಸೆಲ್ಸಿಯಸ್ ದಾಟಿದ್ದು, ಸೆಖೆಯಿಂದ ಕಂಗೆಟ್ಟಿದ್ದ ಜನರಿಗೆ ಈ ಮಳೆ ನಿರಾಳತೆ ನೀಡಲಿದೆ.

ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ 30 ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಇದರೊಂದಿಗೆ ಗುಡುಗು-ಮಿಂಚಿನ ಅಬ್ಬರವೂ ಇರಲಿದೆ ಎಂದು ತಿಳಿಸಲಾಗಿದೆ.

Also Read : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ : ಯೆಲ್ಲೋ ಅಲರ್ಟ್ ಘೋಷಣೆ

ಉತ್ತರ ಕರ್ನಾಟಕಕ್ಕೆ ‘ಆರೆಂಜ್ ಅಲರ್ಟ್’

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಿರಲಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಎಚ್ಚರಿಕೆ ವಹಿಸುವಂತೆ ಸೂಚಿಸಿದೆ. ಈ ಭಾಗದಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ.

ರಾಜಧಾನಿ ಬೆಂಗಳೂರಲ್ಲಿ ಸುರಿಯಲಿದೆಯಾ ಮಳೆ ?

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ತುಂತುರು ಮಳೆಯಾಗುವ ಸಾಧ್ಯತೆಯಿದೆ. ನಗರದ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರಲಿದೆ. ಹಬ್ಬದ ದಿನವಾದ ಇಂದು ಮೋಡ ಕವಿದ ವಾತಾವರಣ ಇರುವುದರಿಂದ ಬಿಸಿಲಿನ ತಾಪ ಕೊಂಚ ಕಡಿಮೆಯಾಗಲಿದೆ.

Also Read : ಸೌಜನ್ಯ ಕೇಸ್‌ಗೆ ಬಿಗ್ ಟ್ವಿಸ್ಟ್: ಸುಪ್ರೀಂ ಕೋರ್ಟ್ ಮಹತ್ವದ ಆದೇಶ ?

ಹವಾಮಾನ ಇಲಾಖೆ ನೀಡಿರುವೆ ಎಚ್ಚರಿಕೆ ಏನು ?

ಒಟ್ಟಾರೆಯಾಗಿ, ಏಪ್ರಿಲ್ 5 ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಹಂತ ಹಂತವಾಗಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ತಜ್ಞರು ಅಂದಾಜಿಸಿದ್ದಾರೆ. ಇದು ಕೇವಲ ಬಿಸಿಲಿನಿಂದ ರಕ್ಷಣೆ ನೀಡುವುದಲ್ಲದೆ, ಅಂತರ್ಜಲ ಮಟ್ಟ ಏರಿಕೆಗೂ ಪೂರಕವಾಗಲಿದೆ.

Karnataka weather update Udupi mangaluru rain alert march 26

Exit mobile version