ಕುಂದಾಪುರದಲ್ಲಿ ಶೂಟೌಟ್‌ : ಬಾರಕೂರು ವ್ಯಕ್ತಿಯ ಹತ್ಯೆ

ಕರಾವಳಿ ಬೆಳ್ಳಂಬೆಳ್ಳಗ್ಗೆಯೇ ಬೆಚ್ಚಿ ಬಿದ್ದಿದೆ. ಕುಂದಾಪುರದಲ್ಲಿ ಶೂಟೌಟ್‌ ನಡೆದಿದ್ದು, ಉಡುಪಿ ಜಿಲ್ಲೆಯ ಬಾರಕೂರು ಮೂಲದ ಐವನ್‌ ರಿಚರ್ಡ್‌ ಮಸ್ಕರೇನ್‌ ಎಂಬವರು ಹತ್ಯೆಯಾಗಿದ್ದಾರೆ.

ಕುಂದಾಪುರ : ಕರಾವಳಿ ಬೆಳ್ಳಂಬೆಳ್ಳಗ್ಗೆಯೇ ಬೆಚ್ಚಿ ಬಿದ್ದಿದೆ. ಕುಂದಾಪುರದಲ್ಲಿ ಶೂಟೌಟ್‌ ನಡೆದಿದ್ದು, ಉಡುಪಿ ಜಿಲ್ಲೆಯ ಬಾರಕೂರಿನ ಕಚ್ಚೂರು ಮೂಲದ ಐವನ್‌ ರಿಚರ್ಡ್‌ ಮಸ್ಕರೇನಸ್ ಎಂಬವರು ಹತ್ಯೆಯಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಕುಂದಾಪುರದ ಹೋಲಿ ರೋಜರಿ ಚರ್ಚ್‌ ಬಳಿಯಲ್ಲಿ ಈ ಘಟನೆ ನಡೆದಿದೆ. ಮುಂಜಾನೆ 3.3ರ ಸುಮಾರಿಗೆ 45 ವರ್ಷ ಪ್ರಾಯದ ಐವನ್‌ ರಿಚರ್ಡ್‌ ಮಸ್ಕರೇನಸ್ ತನ್ನ ಕಾರಿನಲ್ಲಿ ಬರುತ್ತಿದ್ದ ವೇಳೆಯಲ್ಲಿ ಈ  ಘಟನೆ ನಡೆದಿದೆ. ಶೂಟೌಟ್‌ ಮಾಡಿದ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ.

Kundapura Shootout Ivan Richard Mascarenhas death Holy Rosary Church

ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ಈ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಕುಂದಾಪುರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Kundapura Shootout Ivan Richard Mascarenhas death Holy Rosary Church

ಉಡುಪಿ ಎಸ್‌ಪಿ ಹರಿರಾಂ ಶಂಕರ್‌ ಸೇರಿದಂತೆ ಹಲವು ಹಿರಿಯ ಪೊಲೀಸ್‌ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Kundapura Shootout Ivan Richard Mascarenhas death Holy Rosary Church

Ashwath Acharya | ಅಶ್ವಥ್ ಆಚಾರ್ಯ

ನ್ಯೂಸ್‌ ನೆಕ್ಸ್ಟ್‌ನ ಹಿರಿಯ ವರದಿಗಾರರಾಗಿರುವ ಅಶ್ವಥ್‌ ಆಚಾರ್ಯ ಅವರು ಪತ್ರಕರ್ತರಾಗಿ ಸುಮಾರು 20 ವರ್ಷಗಳ ಅನುಭವ ಹೊಂದಿದ್ದಾರೆ. ಕರ್ನಾಟಕದ ಪ್ರಖ್ಯಾತ ಸುದ್ದಿವಾಹಿನಿ, ಕನ್ನಡ ಪ್ರತಿಷ್ಠಿತ ದಿನ ಪತ್ರಿಕೆಗಳಲ್ಲಿ ಹಾಗೂ ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. More »