ಉಡುಪಿ : ಕಂದಕಕ್ಕೆ ಉರುಳಿದ ಶಾಲಾ ಬಸ್‌, 7 ವಿದ್ಯಾರ್ಥಿಗಳಿಗೆ ಗಾಯ

ಕ್ರೈಸ್ಟ್‌ ಕಿಂಗ್‌ ಶಾಲೆಯ ಬಸ್ಸು ಬೆಳಗ್ಗೆ ಮಕ್ಕಳನ್ನು ಹತ್ತಿಸಿಕೊಂಡು ಶಾಲೆಯ ಕಡೆಗೆ ತೆರಳುತ್ತಿದ್ದ ವೇಳೆಯಲ್ಲಿ ಈ ಘಟನೆ ನಡೆದಿದೆ. ಶಾಲಾ ಬಸ್‌ ಉಡುಪಿಯ ಕೊಡಂಗೆ ಎಂಬಲ್ಲಿ ಬರುತ್ತಿದ್ದಾಗ ಈ ಅವಘಡ ಸಂಭವಿಸಿದೆ.

ಉಡುಪಿ : ಶಾಲಾ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಘಟನೆ ಉಡುಪಿ ಜಿಲ್ಲೆಯ ಕೊಡಂಗೆ ದೇವಸ್ಥಾನದ ಬಳಿಯಲ್ಲಿ ನಡೆದಿದೆ. ಘಟನೆಯಲ್ಲಿ ಸುಮಾರು 7 ವಿದ್ಯಾರ್ಥಿಗಳು ಗಾಯಗೊಂಡಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕ್ರೈಸ್ಟ್‌  ಶಾಲೆಯ ಬಸ್ಸು ಬೆಳಗ್ಗೆ ಮಕ್ಕಳನ್ನು ಹತ್ತಿಸಿಕೊಂಡು ಶಾಲೆಯ ಕಡೆಗೆ ತೆರಳುತ್ತಿದ್ದ ವೇಳೆಯಲ್ಲಿ ಈ ಘಟನೆ ನಡೆದಿದೆ. ಶಾಲಾ ಬಸ್‌ ಉಡುಪಿಯ ಕೊಡಂಗೆ ದೇವಸ್ಥಾನದ ಬಳಿ ಬರುತ್ತಿದ್ದಾಗ ಈ ಅವಘಡ ಸಂಭವಿಸಿದೆ.

ಬಸ್‌ ಕಂದಕಕ್ಕೆ ಉರುಳುತ್ತಿದ್ದಂತೆಯೇ ಬಸ್ಸಿನಲ್ಲಿದ್ದ ಮಕ್ಕಳನ್ನು ಸ್ಥಳೀಯರ ನೆರವಿನಿಂದ ಹೊರಗೆ ತೆಗೆಯಲಾಗಿದೆ. ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳಿಗೆ ಚಿಕಿತ್ಸೆಯನ್ನು ಕೊಡಿಸಲಾಗಿದೆ.   ಓರ್ವ ವಿದ್ಯಾರ್ಥಿನಿಗೆ ಗಂಭೀರ ಗಾಯವಾಗಿದೆ. ಘಟನೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

udupi christ school bus accident

Exit mobile version