ಉಡುಪಿ : ಶಾಲಾ ಬಸ್ವೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಘಟನೆ ಉಡುಪಿ ಜಿಲ್ಲೆಯ ಕೊಡಂಗೆ ದೇವಸ್ಥಾನದ ಬಳಿಯಲ್ಲಿ ನಡೆದಿದೆ. ಘಟನೆಯಲ್ಲಿ ಸುಮಾರು 7 ವಿದ್ಯಾರ್ಥಿಗಳು ಗಾಯಗೊಂಡಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕ್ರೈಸ್ಟ್ ಶಾಲೆಯ ಬಸ್ಸು ಬೆಳಗ್ಗೆ ಮಕ್ಕಳನ್ನು ಹತ್ತಿಸಿಕೊಂಡು ಶಾಲೆಯ ಕಡೆಗೆ ತೆರಳುತ್ತಿದ್ದ ವೇಳೆಯಲ್ಲಿ ಈ ಘಟನೆ ನಡೆದಿದೆ. ಶಾಲಾ ಬಸ್ ಉಡುಪಿಯ ಕೊಡಂಗೆ ದೇವಸ್ಥಾನದ ಬಳಿ ಬರುತ್ತಿದ್ದಾಗ ಈ ಅವಘಡ ಸಂಭವಿಸಿದೆ.
ಬಸ್ ಕಂದಕಕ್ಕೆ ಉರುಳುತ್ತಿದ್ದಂತೆಯೇ ಬಸ್ಸಿನಲ್ಲಿದ್ದ ಮಕ್ಕಳನ್ನು ಸ್ಥಳೀಯರ ನೆರವಿನಿಂದ ಹೊರಗೆ ತೆಗೆಯಲಾಗಿದೆ. ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳಿಗೆ ಚಿಕಿತ್ಸೆಯನ್ನು ಕೊಡಿಸಲಾಗಿದೆ. ಓರ್ವ ವಿದ್ಯಾರ್ಥಿನಿಗೆ ಗಂಭೀರ ಗಾಯವಾಗಿದೆ. ಘಟನೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
udupi christ school bus accident
